Vegetable Tips - ತರಕಾರಿ ಟಿಪ್ಸ್
ತರಕಾರಿ ಟಿಪ್ಸ್:
ತರಕಾರಿ ಕೊಳ್ಳಲು ಮತ್ತು ಅದನ್ನು ಸಂಗ್ರಹಿಸಲು ಹೆಚ್ಚು ಮಹತ್ವ ಕೊಡಬೇಕು. ಇಲ್ಲಿ ಕೆಲವು ಅಂಶಗಳನ್ನು ತಿಳಿಸಿರುವೆ. ಅನುಕೂಲವಾದರೆ ಸಂತೋಷ.
ತರಕಾರಿಗಳನ್ನು ಕೊಳ್ಳುವಾಗ ಯಾವಾಗಲೂ ಗಮನ ಹರಿಸಬೇಕು, ತುಂಬಾ ಬಲಿತಿರುವ ತರಕಾರಿಗಳನ್ನು ಕೊಂಡುಕೊಳ್ಳಬೇಡಿ, ಅದರಲ್ಲಿರಬೇಕಾದ ವಿಟಮಿನ್ಸ್,ಪ್ರೋಟಿನ್ಸ್ ಮತ್ತು ಇತರೆ ಸತ್ವಗಳು ಬಲಿತ ಕಾಯಿಯಲ್ಲಿ ಕಡಿಮೆ ಇರುತ್ತದೆ, ಕೆಲವೊಂದರಲ್ಲಿ ಇರುವುದೇ ಇಲ್ಲ. ಆದ್ದರಿಂದ ಅದನ್ನು ತಿಂದು ಪ್ರಯೋಜನವೂ ಆಗುವುದಿಲ್ಲ. ಬೇಯಿಸುವುದು ಕಷ್ಟ ಮತ್ತು ಬೇಯಲು ಬಹಳ ಸಮಯ ಕೂಡ ತೆಗೆದುಕೊಳ್ಳುತ್ತದೆ. ಆಗಾಗಿ ಎಳೆಯ ಮತ್ತು ಮಧ್ಯಮ ರೀತಿಯ ಹಾಗೂ ತಾಜಾ ಆಗಿರುವ ತರಕಾರಿಗಳನ್ನು ಮಾತ್ರ ತೆಗೆದುಕೊಂಡು ಉಪಯೋಗಿಸಿ, ಕೆಲವು ತರಕಾರಿಗಳು ಅಂಗಡಿಯಿಂದ ತಂದ ಎರಡು-ಮೂರು ದಿನಗಳ ಹಂತರದಲ್ಲಿ ಉಪಯೋಗಿಸಿ, ಕೆಲವು ಸುಮಾರು ದಿನ ತಾಜಾ ಆಗಿರುತ್ತದೆ, ಕೆಲವು ತಂದಾಗ ಎಷ್ಟೇ ಫ್ರೆಶ್ ಇದ್ದರೂ ಸಹ ಬೇಗ ಬಲಿಯುತ್ತವೆ ಮತ್ತು ಒಣಗಿದಂತಾಗುತ್ತದೆ. ಫ್ರಿಡ್ಜ್ ನಲ್ಲಿ ಇಟ್ಟರು ಸಹ ಕೆಲವೊಂದು ಬೇಗ ಹಾಳಾಗುತ್ತವೆ.
ತರಕಾರಿಗಳನ್ನು ಪೇಪರ್ ನಲ್ಲಿ ಸುತ್ತಿಟ್ಟು ಕವರ್ ನಲ್ಲಿ ಇಡಿ, ಕವರ್ ನಲ್ಲಿ ಇಟ್ಟಾಗ ನೀರಿನ ಅಂಶ ಹೀರಿಕೊಂಡು ಬಹಳ ದಿನ ತರಕಾರಿ ಇರುತ್ತದೆ, ಬೇಗ ಹಾಳಾಗುವುದಿಲ್ಲ. ಪ್ಲಾಸ್ಟಿಕ್ ಕವರ್ ಗಿಂತ, ಪೇಪರ್ ಕವರ್ ನಲ್ಲಿ ಇಟ್ಟರೆ ತುಂಬಾ ಒಳ್ಳೆಯದು. ತರಕಾರಿ ಚೆನ್ನಾಗಿರುತ್ತದೆ.
12:28 AM | Labels: ತರಕಾರಿ ಟಿಪ್ಸ್:Vegetable Tips | 0 Comments
Radish - ಮೂಲಂಗಿ ಉಪಯೋಗಗಳು:
ಮೂಲಂಗಿ:
ಮೂಲಂಗಿಯಿಂದ ತುಂಬಾ ಉಪಯೋಗಗಳಿವೆ, ಇದನ್ನು ನಾನಾ ರೀತಿಯಾಗಿ ಆಹಾರದಲ್ಲಿ ಬಳಸಬಹುದು. ಬೇಳೆಯೊಂದಿಗೆ ಸೇರಿಸಿ ಸಾಂಬಾರ್ ತಯಾರಿಸಬಹುದು, ಚಟ್ನಿಯೊಂದಿಗೆ ಜಜ್ಜಿ ಸೇರಿಸಿವುದರಿಂದ ಮೂಲಂಗಿ ಚಟ್ನಿ ತಯಾರಿ ಆಗುತ್ತದೆ. ಚಪಾತಿ ಹಿಟ್ಟಿಗೆ ಸೇರಿಸಿ ಪರೋಟ ಮಾಡಬಹುದು. ಸಲಾಡ್ ತರಹ ಉಪಯೋಗಿಸಿ ಹಸಿಯಾಗಿ ತಿನ್ನಬಹುದು. ಇದು ತಾಜಾ ತರಕಾರಿಯಾಗಿರುವುದರಿಂದ ಹಸಿಯಾಗಿ ತಿನ್ನಬಹುದು. ಇದನ್ನು ಹಸಿಯಾಗಿ ತಿನ್ನುವುದರಿಂದಲೇ ಉಪಯೋಗಗಳು ಹೆಚ್ಚು.
- ಹಸಿ ಮೂಲಂಗಿಯನ್ನು ತುರಿದು ಉಪ್ಪು ಮತ್ತು ನಿಂಬೆರಸ ಸೇರಿಸಿ ತಿಂದರೆ ನೆಗಡಿ ನಿವಾರಣೆಯಾಗುತ್ತದೆ.
- ಮೂಲಂಗಿ ಬೀಜವನ್ನು ನಿಂಬೆರಸದಲ್ಲಿ ಅರೆದು ಹಚ್ಚುವುದರಿಂದ ಹುಳುಕಡ್ಡಿ, ತುರಿ ರೋಗಗಳು ಗುಣವಾಗುತ್ತದೆ.
- ಊಟದಲ್ಲಿ ಹಸಿಮೂಲಂಗಿಯನ್ನು ಸೇವಿಸುವುದರಿಂದ ಕಣ್ಣು,ಮೂಗು,ಕಿವಿ ಮತ್ತು ಗಂಟಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ. ಪ್ರತಿದಿನವೂ ಹಸಿಮೂಲಂಗಿಯನ್ನು ಬಳಸಿ, ಒಳ್ಳೆಯದು.
- ಚೇಳು ಕುಟುಕಿದ ಜಾಗಕ್ಕೆ ಮೂಲಂಗಿ ಮತ್ತು ಉಪ್ಪನ್ನು ಅರೆದು ಹಚ್ಚಿದರೆ ವಿಷ ಏರುವುದಿಲ್ಲ ಮತ್ತು ಉರಿ ಕಮ್ಮಿಯಾಗುತ್ತದೆ.
- ಹಸಿ ಮೂಲಂಗಿಯ ಚೂರುಗಳಿಗೆ ನಿಂಬೆರಸ, ಕಾಳು ಮೆಣಸಿನಪುಡಿ ಮತ್ತು ಉಪ್ಪು ಬೆರೆಸಿ ತಿನ್ನುವುದರಿಂದ ಕಾಮಾಲೆ ರೋಗ, ಕಣ್ಣಿನ ತೊಂದರೆ, ಅಜೀರ್ಣ ನಿವಾರಣೆಯಾಗುತ್ತದೆ.
- ಮೂಲಂಗಿ ಸೊಪ್ಪಿನ ರಸವನ್ನು ಸೇವಿಸುವುದರಿಂದ ಮೂತ್ರವೂ ಕಟ್ಟಿಕೊಂಡಿದ್ದರೆ ಅದರ ಬಿಡುಗಡೆಯಾಗುತ್ತದೆ.
- ಮೂಲಂಗಿ ಸೊಪ್ಪಿನ ಪಲ್ಯವನ್ನು ತಯಾರಿಸಬಹುದು, ಇದು ಚೆನ್ನಾಗಿರುತ್ತದೆ ಮತ್ತು ಆರೋಗ್ಯಕ್ಕೂ ಒಳ್ಳೆಯದು. ಆದರೆ ಚೆನ್ನಾಗಿರುವ ಸೊಪ್ಪನ್ನು ನೋಡಿ ತೆಗೆದುಕೊಳ್ಳಬೇಕು.
- ದಿನನಿತ್ಯ ಸಲಾಡ್ ರೀತಿಯಲ್ಲಿ ಮೂಲಂಗಿಯನ್ನು ಸೇವಿಸಿ, ಇದರಿಂದ ತುಂಬಾ ಅನುಕೂಲಗಳಾಗುತ್ತವೆ. ಒಂದೇ ತರಹ ತಿನ್ನಲು ಬೇಸರ ಎನಿಸಿದರೆ, ಚಟ್ನಿಯೊಂದಿಗೆ ಬೆರೆಸಿ, ಮೂಲಂಗಿ ಚಟ್ನಿ ಅಥವ ಮೂಲಂಗಿ ಪರೋಟ ತಯಾರಿಸಿ ತಿನ್ನಬಹುದು.
ಮೂಲಂಗಿ ಪರೋಟ ಮತ್ತು ಚಟ್ನಿ ರೆಸಿಪಿಯನ್ನು ಅಡಿಗೆ ರೆಸಿಪಿಯಲ್ಲಿ ನೋಡಬಹುದು.10:34 PM | Labels: KITCHEN / COOKING TIPS - ಅಡಿಗೆ ಮನೆಯ ಕೆಲವು ಉಪಯುಕ್ತ ಮಾಹಿತಿಗಳು, Radish / ಮೂಲಂಗಿ | 0 Comments
Fennel Seeds - ಸೋಂಪು
ಸೋಂಪು ಕಾಳನ್ನು ಪ್ರತಿದಿನ ಊಟವಾದ ಬಳಿಕ ಒಂದೆರಡು ಚಮಚ ತಿನ್ನುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ.ಊಟದ ನಂತರ ತಿನ್ನುವುದರಿಂದ ಬಾಯಲ್ಲಿನ ವಾಸನೆಯೂ ಕಮ್ಮಿಯಾಗುತ್ತದೆ.
ಸೋಂಪು ಕಾಳನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ ಅದರ ನೀರಿನಿಂದ ಕಣ್ಣುಗಳನ್ನು ತೊಳೆಯುವುದರಿಂದ ಕಣ್ಣಿನ ಅನೇಕ ತೊಂದರೆಗಳು ನಿವಾರಣೆಗಳಾಗುತ್ತವೆ.
ಸೋಂಪು ಅನ್ನು ನೀರಿನಲ್ಲಿ ಕುದಿಸಿ, ಅದರ ಡಿಕಾಕ್ಷನ್ ತಯಾರಿಸಿ, ಅದನ್ನು ಸೇವಿಸುವುದರಿಂದ ಮಹಿಳೆಯರಲ್ಲಿ ಮಾಸಿಕ ದಿನಗಳಲ್ಲಿ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಹೊಟ್ಟೆನೋವು ಮತ್ತು ಇತರೆ ತೊಂದರೆ ನಿವಾರಣೆ. ಪೀರಿಯಡ್ಸ್ ಕೂಡ ರೆಗ್ಯುಲರ್ ಆಗಿ ಇರುತ್ತದೆ.
ಇದು ಮಕ್ಕಳಿಗೂ ಒಳ್ಳೆಯದು. ಇದರಿಂದ ಅವರಲ್ಲಿ ಉಂಟಾಗುವ ಉದರ ತೊಂದರೆಗಳ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ.
ಸೋಂಪು ಕಾಳನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ ಅದರ ನೀರಿನಿಂದ ಕಣ್ಣುಗಳನ್ನು ತೊಳೆಯುವುದರಿಂದ ಕಣ್ಣಿನ ಅನೇಕ ತೊಂದರೆಗಳು ನಿವಾರಣೆಗಳಾಗುತ್ತವೆ.
ಸೋಂಪು ಅನ್ನು ನೀರಿನಲ್ಲಿ ಕುದಿಸಿ, ಅದರ ಡಿಕಾಕ್ಷನ್ ತಯಾರಿಸಿ, ಅದನ್ನು ಸೇವಿಸುವುದರಿಂದ ಮಹಿಳೆಯರಲ್ಲಿ ಮಾಸಿಕ ದಿನಗಳಲ್ಲಿ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಹೊಟ್ಟೆನೋವು ಮತ್ತು ಇತರೆ ತೊಂದರೆ ನಿವಾರಣೆ. ಪೀರಿಯಡ್ಸ್ ಕೂಡ ರೆಗ್ಯುಲರ್ ಆಗಿ ಇರುತ್ತದೆ.
ಇದು ಮಕ್ಕಳಿಗೂ ಒಳ್ಳೆಯದು. ಇದರಿಂದ ಅವರಲ್ಲಿ ಉಂಟಾಗುವ ಉದರ ತೊಂದರೆಗಳ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ.
6:33 AM | Labels: Fennel Seeds - ಸೋಂಪು, Roti and Chapathi Tips -ರೊಟ್ಟಿ ಮತ್ತು ಚಪಾತಿಯ ಟಿಪ್ಸ್ | 0 Comments
Subscribe to:
Posts (Atom)
All rights reserved. Powered by Blogger.